ಬ್ರೇಕಿಂಗ್ ನ್ಯೂಸ್
23-03-21 08:07 pm Headline Karnataka News Network ಕರ್ನಾಟಕ
ಕಾರವಾರ, ಮಾರ್ಚ್ 23: ಬೊಲೆರೋ ಕಾರು ಹಾಗೂ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿಯ ರಾಜೇಶ್ವರಿ ಪರಡ್ಡಿ (35) ಹಾಗೂ ಚಿಕ್ಕಮ್ಮ ಪಾಟೀಲ (28) ಮೃತ ಮಹಿಳೆಯರಾಗಿದ್ದು, ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶ್ರುತಿ, ಮಕ್ಕಳಾದ ಆಕಾಶ್ ಹಾಗೂ ಅಪೇಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಹೊಸ ಬೊಲೆರೊ ಕಾರು ಖರೀದಿಸಿದ್ದ ಕಾರಣ ಬಾಗಲಕೋಟೆ ಮೂಲದ ಒಂದೇ ಕುಟುಂಬದ ಎಂಟು ಮಂದಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ತಿರುವಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮುಂದೆ ದೂಕಿದೆ. ಈ ವೇಳೆ ಎದುರು ಬರುತ್ತಿದ್ದ ಟಿಪ್ಪರ್ ಗೆ ಬೊಲೆರೊ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಇನ್ನುಳಿದ ಏಳು ಮಂದಿಯನ್ನು ಬೊಲೆರೊದಿಂದ ಹೊರ ತೆಗೆದ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ.
ಅಪಘಾತದಿಂದ ಘಟ್ಟದಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಸಿಪಿಐ ಸುರೇಶ್ ಯಳ್ಳೂರ್ ಹಾಗೂ ಪಿಎಸ್ಐ ಮಂಜುನಾಥ್ ಗೌಡರ ತೆರಳಿ ಪರಿಶೀಲನೆ ನಡೆಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Two women were killed on the spot after a Bolero car was hit by two trucks after driver lost control in Yellapur, Karwar. The family was said to be going to
Daramasthala.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm