ಬ್ರೇಕಿಂಗ್ ನ್ಯೂಸ್
23-03-21 08:07 pm Headline Karnataka News Network ಕರ್ನಾಟಕ
ಕಾರವಾರ, ಮಾರ್ಚ್ 23: ಬೊಲೆರೋ ಕಾರು ಹಾಗೂ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿಯ ರಾಜೇಶ್ವರಿ ಪರಡ್ಡಿ (35) ಹಾಗೂ ಚಿಕ್ಕಮ್ಮ ಪಾಟೀಲ (28) ಮೃತ ಮಹಿಳೆಯರಾಗಿದ್ದು, ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶ್ರುತಿ, ಮಕ್ಕಳಾದ ಆಕಾಶ್ ಹಾಗೂ ಅಪೇಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಹೊಸ ಬೊಲೆರೊ ಕಾರು ಖರೀದಿಸಿದ್ದ ಕಾರಣ ಬಾಗಲಕೋಟೆ ಮೂಲದ ಒಂದೇ ಕುಟುಂಬದ ಎಂಟು ಮಂದಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ತಿರುವಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮುಂದೆ ದೂಕಿದೆ. ಈ ವೇಳೆ ಎದುರು ಬರುತ್ತಿದ್ದ ಟಿಪ್ಪರ್ ಗೆ ಬೊಲೆರೊ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಇನ್ನುಳಿದ ಏಳು ಮಂದಿಯನ್ನು ಬೊಲೆರೊದಿಂದ ಹೊರ ತೆಗೆದ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ.
ಅಪಘಾತದಿಂದ ಘಟ್ಟದಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಸಿಪಿಐ ಸುರೇಶ್ ಯಳ್ಳೂರ್ ಹಾಗೂ ಪಿಎಸ್ಐ ಮಂಜುನಾಥ್ ಗೌಡರ ತೆರಳಿ ಪರಿಶೀಲನೆ ನಡೆಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Two women were killed on the spot after a Bolero car was hit by two trucks after driver lost control in Yellapur, Karwar. The family was said to be going to
Daramasthala.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm