ಬ್ರೇಕಿಂಗ್ ನ್ಯೂಸ್
23-03-21 08:07 pm Headline Karnataka News Network ಕರ್ನಾಟಕ
ಕಾರವಾರ, ಮಾರ್ಚ್ 23: ಬೊಲೆರೋ ಕಾರು ಹಾಗೂ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿಯ ರಾಜೇಶ್ವರಿ ಪರಡ್ಡಿ (35) ಹಾಗೂ ಚಿಕ್ಕಮ್ಮ ಪಾಟೀಲ (28) ಮೃತ ಮಹಿಳೆಯರಾಗಿದ್ದು, ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶ್ರುತಿ, ಮಕ್ಕಳಾದ ಆಕಾಶ್ ಹಾಗೂ ಅಪೇಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಹೊಸ ಬೊಲೆರೊ ಕಾರು ಖರೀದಿಸಿದ್ದ ಕಾರಣ ಬಾಗಲಕೋಟೆ ಮೂಲದ ಒಂದೇ ಕುಟುಂಬದ ಎಂಟು ಮಂದಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ತಿರುವಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮುಂದೆ ದೂಕಿದೆ. ಈ ವೇಳೆ ಎದುರು ಬರುತ್ತಿದ್ದ ಟಿಪ್ಪರ್ ಗೆ ಬೊಲೆರೊ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾರೆ.
ಇನ್ನುಳಿದ ಏಳು ಮಂದಿಯನ್ನು ಬೊಲೆರೊದಿಂದ ಹೊರ ತೆಗೆದ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ.
ಅಪಘಾತದಿಂದ ಘಟ್ಟದಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಸಿಪಿಐ ಸುರೇಶ್ ಯಳ್ಳೂರ್ ಹಾಗೂ ಪಿಎಸ್ಐ ಮಂಜುನಾಥ್ ಗೌಡರ ತೆರಳಿ ಪರಿಶೀಲನೆ ನಡೆಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Two women were killed on the spot after a Bolero car was hit by two trucks after driver lost control in Yellapur, Karwar. The family was said to be going to
Daramasthala.
15-09-25 03:39 pm
HK News Desk
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm