ಬ್ರೇಕಿಂಗ್ ನ್ಯೂಸ್
23-03-21 08:07 pm Headline Karnataka News Network ಕರ್ನಾಟಕ
ಕಾರವಾರ, ಮಾರ್ಚ್ 23: ಬೊಲೆರೋ ಕಾರು ಹಾಗೂ ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬಿದರಿಯ ರಾಜೇಶ್ವರಿ ಪರಡ್ಡಿ (35) ಹಾಗೂ ಚಿಕ್ಕಮ್ಮ ಪಾಟೀಲ (28) ಮೃತ ಮಹಿಳೆಯರಾಗಿದ್ದು, ತಿಮ್ಮನ ಗೌಡ, ಹನುಮಂತ, ಲಕ್ಷ್ಮೀ, ಶ್ರುತಿ, ಮಕ್ಕಳಾದ ಆಕಾಶ್ ಹಾಗೂ ಅಪೇಕ್ಷಾ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನಿಸಲಾಗಿದೆ.
ಹೊಸ ಬೊಲೆರೊ ಕಾರು ಖರೀದಿಸಿದ್ದ ಕಾರಣ ಬಾಗಲಕೋಟೆ ಮೂಲದ ಒಂದೇ ಕುಟುಂಬದ ಎಂಟು ಮಂದಿ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದರು. ಯಲ್ಲಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಲಾರಿಯೊಂದು ಚಾಲಕನ ನಿಯಂತ್ರಣಕ್ಕೆ ಸಿಗದೆ ತಿರುವಿನಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದವರ ಬೊಲೆರೊಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಮುಂದೆ ದೂಕಿದೆ. ಈ ವೇಳೆ ಎದುರು ಬರುತ್ತಿದ್ದ ಟಿಪ್ಪರ್ ಗೆ ಬೊಲೆರೊ ಡಿಕ್ಕಿಯಾಗಿದೆ. ಟಿಪ್ಪರ್ ಹಾಗೂ ಲಾರಿಯ ನಡುವೆ ಸಿಕ್ಕಿ ಬೊಲೆರೊ ಅಪ್ಪಚ್ಚಿಯಾಗಿದ್ದು, ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದಾರೆ.

ಇನ್ನುಳಿದ ಏಳು ಮಂದಿಯನ್ನು ಬೊಲೆರೊದಿಂದ ಹೊರ ತೆಗೆದ ಸ್ಥಳೀಯರು ಹಾಗೂ ಪೊಲೀಸರು ಕೂಡಲೇ ತಾಲೂಕು ಆಸ್ಪತ್ರೆಗೆ ಸಾಗಿಸಿದರಾದರೂ ಓರ್ವ ಮಹಿಳೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ.
ಅಪಘಾತದಿಂದ ಘಟ್ಟದಲ್ಲಿ ಕೆಲ ಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಸ್ಥಳಕ್ಕೆ ಸಿಪಿಐ ಸುರೇಶ್ ಯಳ್ಳೂರ್ ಹಾಗೂ ಪಿಎಸ್ಐ ಮಂಜುನಾಥ್ ಗೌಡರ ತೆರಳಿ ಪರಿಶೀಲನೆ ನಡೆಸಿ, ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.
Two women were killed on the spot after a Bolero car was hit by two trucks after driver lost control in Yellapur, Karwar. The family was said to be going to
Daramasthala.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm