ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm