ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm