ಬ್ರೇಕಿಂಗ್ ನ್ಯೂಸ್
24-03-21 11:08 am Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಮಾ.24: ಕಾಡಿನಿಂದ ನಾಡಿಗೆ ಬಂದಿದ್ದ ಪ್ರಾಣಿಯೊಂದಿಗೆ ಜನ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಪಟ್ಟ ಅಪರೂಪದ ಘಟನೆಯೊಂದು ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ತಡರಾತ್ರಿ ಕಾಡುಪಾಪವೊಂದು ಕಾಡಿನಿಂದ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ಗೆ ದಾರಿತಪ್ಪಿ ಬಂದಿದ್ದು ನಾಯಿಗಳಿಂದ ಅಪರೂಪದ ಅತಿಥಿಯನ್ನು ರಕ್ಷಿಸಿದ್ದಾರೆ. ಅಡವಿ ಪಾಪನ ಕಂಡು ಜನ ಸಂತಸಗೊಂಡಿದ್ದಾರೆ. ಮೊದಲಿಗೆ ಭಯವಾದರೂ ಅದು ಕಾಡುಪಾಪ ಎಂದು ತಿಳಿದ ಮೇಲೆ ಪೆಟ್ರೋಲ್ ಬಂಕ್ಗೆ ಬಂದಿದ್ದ ಸವಾರರು ಕಾಡುಪಾಪದೊಂದಿಗೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.
ಇನ್ನು ಕಾಡಿನಿಂದ ದಾರಿ ತಪ್ಪಿ ಬಂದಿದ್ದ ಕಾಡುಪಾಪವನ್ನು ಬೀದಿ ನಾಯಿಗಳು ದಾಳಿ ನಡೆಸಿದ್ದವು. ಸದ್ಯ ನಾಯಿ ದಾಳಿಯಿಂದ ಸ್ಥಳೀಯರು ಕಾಡುಪಾಪವನ್ನು ರಕ್ಷಿಸಿದ್ದಾರೆ. ಅಪರೂಪದ ಪ್ರಾಣಿಕಂಡು ಚಕಿತರಾದ ಜನರು ಅದರ ಜೊತೆ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿಗೆ ವಿಷಯ ತಿಳಿಸಿ ಅವರ ಸಮ್ಮುಖದಲ್ಲೇ ಚಾರ್ಮಾಡಿ ಅರಣ್ಯದಲ್ಲಿ ಕಾಡುಪಾಪ ಬಿಟ್ಟು ಬಂದಿದ್ದಾರೆ.
ಇನ್ನು ಕಾಡುಪಾಪಗಳಿಗೆ ದೊಡ್ಡ ಕಣ್ಣು(ಪಾಪೆ) ಇರುವುದರಿಂದ ಅದನ್ನು ಅಡವಿ ಪಾಪ ಎಂದೂ ಸಹ ಕರೆಯುತ್ತಾರೆ. ಕಾಡು ಪ್ರಾಣಿಗಳಲ್ಲೇ ಇದು ಅತ್ಯಂತ ಮುಗ್ಧ ಜೀವಿ. ಕಾಡುಪಾಪಗಳಿಗೆ ಹೆಚ್ಚು ನಾಚಿಕೆ ಸ್ವಭಾವವಿರುತ್ತೆ. ಇವು ನಿಶಾಚರಿ ಜೀವಿಗಳಾದ್ದರಿಂದ ಜನರ ಕಣ್ಣಿಗೆ ಬೀಳುವುದು ಅಪರೂಪ. ತಂಪು ಹವೆಯ ಎಲೆ ತೋಟಗಳು, ಮಾವಿನಮರ, ನೀಲಗಿರಿ, ಆಲ, ಅರಳಿ, ಹುಣಸೆ ಮರಗಳಲ್ಲಿ ಇವು ಬೀಡು ಬಿಡುತ್ತವೆ. ಹಣ್ಣು, ಕಾಯಿ, ಕೀಟ, ಜೀರುಂಡೆ, ಮಿಡತೆ, ಹಲ್ಲಿ, ಹಾವುರಾಣಿ, ಹಕ್ಕಿಗಳ ಮೊಟ್ಟೆ, ಮರಗಪ್ಪೆ ತಿನ್ನುತ್ತವೆ ಎಂದು ಪ್ರಾಣಿ ಪ್ರಿಯರು ಹೇಳುತ್ತಾರೆ.
Slender loris also called as kadu papa was found in Chikmagalur we're people thronged to click selfies with the animal.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm