ಬ್ರೇಕಿಂಗ್ ನ್ಯೂಸ್
21-08-20 03:00 pm Headline Karnataka News Network ಕರ್ನಾಟಕ
ಕೊಪ್ಪಳ, ಆಗಸ್ಟ್ 21: ಕೊರೊನಾ ನಿರ್ಬಂಧದ ನಡುವೆಯೂ ಇಲ್ಲಿನ ಕುಷ್ಟಗಿ ತಾಲೂಕಿನಲ್ಲಿ ಅವಧೂತ ಶುಕಮುನಿ ದೇವರ ಆರಾಧನೆಯ ಹೆಸರಲ್ಲಿ ಭಕ್ತರು ಬಲವಂತವಾಗಿ ಅಡ್ಡಪಲ್ಲಕ್ಕಿ ಉತ್ಸವ ಆಚರಿಸಿದ ಘಟನೆ ನಡೆದಿದ್ದು ಪೊಲೀಸರು 50ಕ್ಕೂ ಅಧಿಕ ಮಂದಿಯನ್ನು ಬಂಧಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಶ್ರೀ ಅವಧೂತ ಶುಕಮುನಿ ದೇವರ ಆರಾಧನೆ ಮಹೋತ್ಸವ ನಿಮಿತ್ತ ಪ್ರತಿ ವರ್ಷ ಅಡ್ಡಪಲ್ಲಕ್ಕಿ ಉತ್ಸವ ಅದ್ಧೂರಿಯಾಗಿ ಆಚರಿಸಲಾಗುತ್ತಿತ್ತು. ಆದರೆ ಈ ಬಾರಿ ಕೊರೊನಾ ಭೀತಿಯಿಂದ ತಲತಲಾಂತರದಿಂದ ಆಚರಿಸಿಕೊಂಡು ಬಂದಿದ್ದ ಅಡ್ಡಪಲ್ಲಕ್ಕಿ ಉತ್ಸವವನ್ನು ಸರಳವಾಗಿ ಆಚರಿಸಲು ದೇವಸ್ಥಾನದ ಆಡಳಿತ ನಿರ್ಧರಿಸಿತ್ತು.
ಇದರಂತೆ, ನಿನ್ನೆ ರಾತ್ರಿ ಅಡ್ಡಪಲ್ಲಕ್ಕಿ ಉತ್ಸವ ಮೆರವಣಿಗೆ ಆರಂಭವಾಗುತ್ತಿದಂತೆ ಏಕಾಏಕಿ ಕೆಲವು ಭಕ್ತರು ಸೇರಿ, ದೇವಸ್ಥಾನದ ಮುಖ್ಯದ್ವಾರದ ಬಾಗಿಲು ಒಡೆಯಲು ಆರಂಭಿಸಿದ್ದಾರೆ. ಕೊನೆಗೆ ದೇವಸ್ಥಾನದ ಬಾಗಿಲು ಮುರಿದು ಪಲ್ಲಕ್ಕಿಯನ್ನು ಹೊರ ತಂದಿದ್ದು ಗ್ರಾಮದಲ್ಲಿ ಮೆರವಣಿಗೆ ಮಾಡಿದ್ದಾರೆ. ಈ ಮಧ್ಯೆ ಪಲ್ಲಕ್ಕಿ ಹೊರಬರುತ್ತಿದಂತೆ ಅಲ್ಲಿಯೇ ನಿಲ್ಲಿಸಿದ್ದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪೊಲೀಸ್ ವಾಹನದ ಗಾಜು ಪುಡಿಯಾಗಿದೆ.
ಅಡ್ಡಪಲ್ಲಕ್ಕಿ ಉತ್ಸವದ ಮೆರವಣಿಗೆ ನಡೆಸಲು ತಹಶೀಲ್ದಾರರು ನಿರ್ಬಂಧ ಹೇರಿದ್ದರೂ ಸಾವಿರಾರು ಮಂದಿ ಜನಜಂಗುಳಿ ಮಧ್ಯೆ ಪಲ್ಲಕ್ಕಿ ಉತ್ಸವ ಆಚರಣೆ ಮಾಡಿದ್ದಾರೆ. ಸ್ಥಳದಲ್ಲಿ ಬೀಡು ಬಿಟ್ಟಿದ್ದ ಕುಷ್ಟಗಿ ತಹಶೀಲ್ದಾರ್ ಎಂ.ಸಿದ್ದೇಶ ಸೇರಿದಂತೆ ಪೊಲೀಸ್ ಅಧಿಕಾರಿಗಳ ಮಾತಿಗೆ ಒಪ್ಪದೆ ಜನರು ಮೆರವಣಿಗೆ ನಡೆಸಿದ್ದಾರೆ. ಕೊನೆಗೆ ಪೊಲೀಸರು ಮತ್ತು ಜನರ ನಡುವೆ ಮಾತಿನ ಚಕಮಕಿ ನಡೆದು, ಪೊಲೀಸರು ಲಾಠಿ ಬೀಸಿದ ಚದುರಿಸುವ ಪ್ರಯತ್ನವನ್ನೂ ಮಾಡಿದರು. ಒಂದು ಗಂಟೆ ಕಾಲದ ಪ್ರಹಸನದ ಬಳಿಕ ಗ್ರಾಮದ ಮಧ್ಯೆ ಜನರು ಪಲ್ಲಕ್ಕಿಯನ್ನು ಬಿಟ್ಟು ಓಡಿದ್ದಾರೆ. ಬಳಿಕ ಪೊಲೀಸರೇ ಪಲ್ಲಕ್ಕಿಯನ್ನು ಹೊತ್ತು ದೇವಸ್ಥಾನಕ್ಕೆ ತಂದಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ರಾತ್ರಿ ಸ್ಥಳಕ್ಕೆ ಎಸ್ಪಿ ಜಿ.ಸಂಗೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಂದಾಯ ನೀರಿಕ್ಷಕ ಮತ್ತು ಪೊಲೀಸ್ ಠಾಣೆ ಸಿಬ್ಬಂದಿಯ ಪ್ರತ್ಯೇಕ ದೂರಿನಂತೆ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm