ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm