ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm