ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm