ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm