ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am