ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm