ಬ್ರೇಕಿಂಗ್ ನ್ಯೂಸ್
24-03-21 05:18 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.24: ಸಿಂಗಲ್ ಹೆಂಡ್ತಿ ಹೇಳಿಕೆಗೆ ಬಿಜೆಪಿ, ಕಾಂಗ್ರೆಸ್ ಪಕ್ಷದ ನಾಯಕರಿಂದ ಭಾರೀ ವಿರೋಧ ಕೇಳಿಬರುತ್ತಲೇ ಆರೋಗ್ಯ ಸಚಿವ ಸುಧಾಕರ್ ತನ್ನ ಹೇಳಿಕೆ ಬಗ್ಗೆ ಕ್ಷಮೆ ಯಾಚಿಸಿದ್ದಾರೆ.
ಇಲ್ಲಿ ಯಾರೂ ಸತ್ಯ ಹರಿಶ್ಚಂದ್ರರು ಅಲ್ಲ. ಪತ್ನಿಯ ಹೊರತಾದ ಸಂಬಂಧ ಎಷ್ಟು ಮಂದಿ ಇಟ್ಟುಕೊಂಡಿಲ್ಲ. ತನಿಖೆ ನಡೆದರೆ ಎಲ್ಲ 224 ಶಾಸಕರ ನೈತಿಕತೆಯ ಬಗ್ಗೆಯೂ ತನಿಖೆಯಾಗಲಿ. ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ರಮೇಶ್ ಕುಮಾರ್ ಎಲ್ಲ ಏಕಪತ್ನಿ ವೃತ ಮಾಡುತ್ತಿದ್ದಾರೆಯೇ ಎಂದು ಸುಧಾಕರ್ ಪ್ರಶ್ನೆ ಮಾಡಿದ್ದರು. ಬಿಜೆಪಿ ನಾಯಕರ ವಿರುದ್ಧ ಹೇಳಿಕೆ ನೀಡುತ್ತಿದ್ದ ಕಾಂಗ್ರೆಸಿಗರನ್ನು ಗುರಿಯಾಗಿರಿಸಿ ಸುಧಾಕರ್ ಹೇಳಿಕೆ ನೀಡಿದ್ದು ವಿವಾದದ ರೂಪ ಪಡೆಯುತ್ತಲೇ ಬಿಜೆಪಿಯ ಕೆಲವು ಶಾಸಕರೇ ವಿರೋಧ ವ್ಯಕ್ತಪಡಿಸಿದ್ದರು. ಮಹಿಳಾ ಶಾಸಕಿಯರೂ ಈ ಬಗ್ಗೆ ಕಿಡಿಕಾರಿದ್ದರು.
ಇದಲ್ಲದೆ, ಸಿದ್ದರಾಮಯ್ಯ, ರೇಣುಕಾಚಾರ್ಯ, ದೇಶಪಾಂಡೆ ಮತ್ತಿತರ ಕೆಲವು ಶಾಸಕರು ಸುಧಾಕರ್ ಸದನದಲ್ಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು. ವಿರೋಧ ಕೇಳಿಬಂದ ಹಿನ್ನೆಲೆಯಲ್ಲಿ ಸುಧಾಕರ್ ಟ್ವೀಟ್ ಮಾಡಿದ್ದು, ಕೆಲವು ನಾಯಕರ ಏಕಪಕ್ಷೀಯ ಮತ್ತು ಪೂರ್ವಾಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲ 224 ಶಾಸಕರ ಬಗ್ಗೆ ಗೌರವ ಇಟ್ಟುಕೊಂಡಿದ್ದೇನೆ. ಇದರಿಂದ ಯಾರಿಗಾದರೂ ನೋವಾಗಿದ್ದಲ್ಲಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ.
— Dr Sudhakar K (@mla_sudhakar) March 24, 2021
2/3
ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ.
— Dr Sudhakar K (@mla_sudhakar) March 24, 2021
3/3
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm