ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm