ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am