ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm