ಬ್ರೇಕಿಂಗ್ ನ್ಯೂಸ್
25-03-21 10:22 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.25: ಬೆಳಗಾವಿ ಲೋಕಸಭೆ ಕ್ಷೇತ್ರ ಮತ್ತು ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರದ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿ ಬಿಜೆಪಿ ಹೈಕಮಾಂಡ್ ಆದೇಶ ಮಾಡಿದೆ. ಬೆಳಗಾವಿಗೆ ಎಲ್ಲರ ನಿರೀಕ್ಷೆ ತಲೆಕೆಳಗು ಮಾಡಿ ಮಾಜಿ ಸಚಿವ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಸುರೇಶ್ ಅಂಗಡಿಗೆ ಬಿಜೆಪಿ ಟಿಕೆಟ್ ನೀಡಿದೆ.
ಲೋಕಸಭೆಗೆ ಬಿಜೆಪಿ ಟಿಕೆಟ್ ನೀಡುವಂತೆ ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕರಿಂದ ಹಿಡಿದು ರಮೇಶ್ ಕತ್ತಿ ಸೇರಿದಂತೆ ಹಲವರು ಲಾಬಿ ನಡೆಸಿದ್ದರು. ಕೆಲವರಂತೂ ದೆಹಲಿಗೂ ಹೋಗಿ ಲಾಬಿ ನಡೆಸಿದ್ದರು. ವೆಂಕಟೇಶ್ವರ ಸ್ವಾಮೀಜಿ ಎಂಬವರು ತಾನೇ ಬಿಜೆಪಿ ಅಭ್ಯರ್ಥಿ ಎಂದು ಹೇಳಿ ನಾಮಪತ್ರವನ್ನೂ ಸಲ್ಲಿಸಿದ್ದರು. ಇದೇ ವೇಳೆ, ಸುರೇಶ್ ಅಂಗಡಿಯವರ ಪುತ್ರಿ ಶ್ರದ್ಧಾ ಹೆಸರು ಕೂಡ ಕೇಳಿಬಂದಿತ್ತು. ಆದರೆ, ಬಿಜೆಪಿ ಹೈಕಮಾಂಡ್ ಮಂಗಳಾ ಅಂಗಡಿಗೆ ಟಿಕೆಟ್ ಘೋಷಣೆ ಮಾಡಿ ಅಚ್ಚರಿ ಮೂಡಿಸಿದೆ.
ಇನ್ನು ಬಸವಕಲ್ಯಾಣ ಕ್ಷೇತ್ರದಲ್ಲಿ ಟಿಕೆಟ್ ನಿರೀಕ್ಷೆ ಮಾಡಿದ್ದ ಭಗವಂತ ಖೂಬಾಗೆ ನಿರಾಸೆಯಾಗಿದ್ದು ಶರಣು ಹೂಗಾರಗೆ ಟಿಕೆಟ್ ನೀಡಿದೆ. ಮಸ್ಕಿ ಕ್ಷೇತ್ರದಲ್ಲಿ ಪ್ರತಾಪಗೌಡ ಪಾಟೀಲ್ ಈಗಾಗಲೇ ನಾಮಪತ್ರ ಸಲ್ಲಿಸಿದ್ದು ಅವರನ್ನೇ ಬಿಜೆಪಿ ಅಭ್ಯರ್ಥಿಯಾಗಿಸಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಲ್ಲಿನ ಪ್ರಭಾವಿ ಮುಖಂಡ ಸತೀಶ್ ಜಾರಕಿಹೊಳಿಗೆ ಟಿಕೆಟ್ ನೀಡಿದ್ದು ಸಾಂಪ್ರದಾಯಿಕವಾಗಿ ಬಿಜೆಪಿಯ ಕ್ಷೇತ್ರ ಆಗಿದ್ದರೂ, ಪೈಪೋಟಿಗೆ ಕಾರಣವಾಗಲಿದೆ. ಎಪ್ರಿಲ್ 17 ರಂದು ಅಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದ ತೆರವಾದ ಸ್ಥಾನಕ್ಕೆ ಬೆಳಗಾವಿ ಉಪ ಚುನಾವಣೆ ನಡೆಯುತ್ತಿದೆ.
Belagavi bypoll elections 2021 BJP ticket go to Angadi family.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm