ಬ್ರೇಕಿಂಗ್ ನ್ಯೂಸ್
26-03-21 12:46 pm Headline Karnataka News Network ಕರ್ನಾಟಕ
ಮಂಗಳೂರು, ಮಾ.26: ದಕ್ಷಿಣ ಕನ್ನಡ - ಕಾಸರಗೋಡು ಗಡಿಭಾಗ ವಿಟ್ಲ ಬಳಿಯ ಸಾಲೆತ್ತೂರಿನಲ್ಲಿ ನಿನ್ನೆ ತಡರಾತ್ರಿ ಪೊಲೀಸರು ಮತ್ತು ರೌಡಿಗಳ ಮಧ್ಯೆ ಜಟಾಪಟಿ ನಡೆದಿದೆ. ಮಂಜೇಶ್ವರ ಪೊಲೀಸರಿಂದ ತಪ್ಪಿಸಿಕೊಂಡು ಹೊರರಾಜ್ಯಕ್ಕೆ ಎಸ್ಕೇಪ್ ಆಗುತ್ತಿದ್ದ ರೌಡಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.

ಮಂಜೇಶ್ವರದ ಮೀಯಪದವಿನಲ್ಲಿ ನಿನ್ನೆ ಒಬ್ಬರಿಗೆ ಗನ್ ತೋರಿಸಿ ಬೆದರಿಸಿದ ಪ್ರಕರಣ ನಡೆದಿತ್ತು. ಈ ಬಗ್ಗೆ ದೂರು ಬಂದಿದ್ದ ಹಿನ್ನೆಲೆಯಲ್ಲಿ ಪೊಲೀಸರು ಮುರತ್ತಣೆ ಮತ್ತು ಮೀಯಪದವಿನ ನಡುವಿನ ರಸ್ತೆಯಲ್ಲಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಗಳು ಮುರತ್ತಣೆ ಭಾಗದಲ್ಲಿ ರೌಡಿಗಳಾಗಿದ್ದು ಪೊಲೀಸರು ಅವರ ಬಂಧನಕ್ಕೆ ಬಲೆ ಬೀಸಿದ್ದರು. ಆದರೆ, ಆರೋಪಿಗಳು ಮೀಯಪದವಿನತ್ತ ಪರಾರಿಯಾಗಿದ್ದು ಅಲ್ಲಿ ಅಡ್ಡಹಾಕಿದಾಗ ಪೊಲೀಸರ ಮೇಲೆ ಫೈರ್ ಮಾಡಲು ಯತ್ನಿಸಿದ್ದಾರೆ. ಪೊಲೀಸರು ಪ್ರತಿದಾಳಿ ನಡೆಸಿದ್ದು ಕಾರು ಬಿಟ್ಟು ನಾಲ್ವರು ಪರಾರಿಯಾಗಿದ್ದರು. ಬಳಿಕ ಕೆಲವು ಗೂಂಡಾಗಳು ಸೇರಿಕೊಂಡು ಕಾರನ್ನು ಮರಳಿ ವಶಕ್ಕೆ ಪಡೆಯಲು ಯತ್ನಿಸಿದ್ದು ಪೊಲೀಸರು ಅದಕ್ಕೆ ಅವಕಾಶ ಕೊಡಲಿಲ್ಲ. ಕಾರನ್ನು ವಶಕ್ಕೆ ಪಡೆದು ಠಾಣೆಗೆ ಒಯ್ದಿದ್ದರೆ, ಹೆಚ್ಚುವರಿ ಪೊಲೀಸರನ್ನು ಕರೆಸಿ ಕಾರ್ಯಾಚರಣೆಗೆ ಮುಂದಾಗಿದ್ದರು.

ಬಳಿಕ ಕಾಸರಗೋಡು ಜಿಲ್ಲೆಯಿಂದ ಆರೋಪಿಗಳು ಪರಾರಿಯಾಗುತ್ತಾರೆಂಬ ಮಾಹಿತಿ ಹಿನ್ನೆಲೆಯಲ್ಲಿ ಗಡಿಭಾಗದಲ್ಲಿ ಚೆಕ್ ಪೋಸ್ಟ್ ಹಾಕಲು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಗೆ ಮನವಿ ಮಾಡಿದ್ದರು. ಅದರಂತೆ, ವಿಟ್ಲ ಪೊಲೀಸರು ನಿನ್ನೆ ರಾತ್ರಿ ಸಾಲೆತ್ತೂರು ಬಳಿ ಬ್ಯಾರಿಕೇಡ್ ಇಟ್ಟು ರಸ್ತೆಗೆ ಅಡ್ಡ ಹಾಕಿದ್ದರು.
ಆರೋಪಿಗಳು ಹುಂಡೈ ಕಾರಿನಲ್ಲಿ ಆಗಮಿಸಿದ್ದು ನಿಲ್ಲಿಸಲು ಸೂಚಿಸಿದಾಗ ಲೆಕ್ಕಿಸದೆ ಬ್ಯಾರಿಕೇಡ್ ಗೆ ಡಿಕ್ಕಿಯಾಗಿಸಿದ್ದಾರೆ. ಈ ವೇಳೆ, ಬಂಧಿಸಲು ಯತ್ನಿಸಿದ ಎಸ್ಐ ವಿನೋದ್ ರೆಡ್ಡಿ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ.

ಆದರೆ, ಆರೋಪಿಗಳು ಕಾರನ್ನು ಬ್ಯಾರಿಕೇಡ್ ಗೆ ಡಿಕ್ಕಿಯಾಗಿಸಿದ್ದರಿಂದ ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆಂದು ದ.ಕ. ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ. ಅಲ್ಲದೆ ಘಟನೆ ವೇಳೆ ಎಸ್ಐ ವಿನೋದ್ ರೆಡ್ಡಿ ಮೇಲೆ ಫೈರ್ ಆಗಿಲ್ಲ ಎಂದು ಖಚಿತ ಪಡಿಸಿದ್ದಾರೆ.
ವಾರದ ಹಿಂದೆ, ಮಂಜೇಶ್ವರ ಠಾಣೆ ಪೊಲೀಸರು ರೌಡಿಸಂ ತೋರಿದ್ದ ನಾಲ್ವರನ್ನು ಬಂಧಿಸಿದ್ದರು. ಗನ್ ಹಿಡಿದು ಸ್ಟೇಟಸ್ ಹಾಕಿದ್ದಕ್ಕಾಗಿ ಬಂಧನ ನಡೆದಿತ್ತು. ಇದರ ಮುಂದುವರಿದ ಭಾಗ ಎನ್ನುವಂತೆ, ಅದೇ ತಂಡದ ಒಬ್ಬಾತ ಸ್ಥಳೀಯ ಒಬ್ಬರಿಗೆ ಗನ್ ತೋರಿಸಿ ಬೆದರಿಕೆ ಹಾಕಿದ್ದ. ಈ ಪ್ರಕರಣಕ್ಕೂ ಚುನಾವಣಾ ರಾಜಕೀಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.
In a shocking incident miscreants opened fire on Vittal sub-inspector (SI) Vinod Reddy. Four from Manjeshwar, Kasargod arrested regarding the incident.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm