ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm