ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm