ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.



ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.



ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm