ಬ್ರೇಕಿಂಗ್ ನ್ಯೂಸ್
28-03-21 05:11 pm Headline Karnataka News Network ಕರ್ನಾಟಕ
ಬೆಳಗಾವಿ,ಮಾ.28: ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಕೇಸ್ನಲ್ಲಿ ಡಿ.ಕೆ. ಶಿವಕುಮಾರ್ ಹೆಸರು ಬಹಿರಂಗ ವಿಚಾರವಾಗಿ ಬೆಳಗಾವಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.
ಎಸ್ಐಟಿ ತನಿಖೆಯ ಬಳಿಕ ಪ್ರಕರಣದ ಸತ್ಯಾಂಶ ಗೊತ್ತಾಗಲಿದೆ. ನಾವು, ನೀವು ಏನೂ ಮಾಡಲು ಆಗುವುದಿಲ್ಲ. ಯುವತಿ ಬರಬೇಕು, ಬಂದ್ರೆ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
20 ದಿನದಿಂದ ನೋಡ್ತಿರುವೆ, ದಿನಕ್ಕೊಂದು ಹೇಳಿಕೆ ಬರ್ತಿವೆ. ಎಸ್ಐಟಿಯವರೇ ಬೇಗ ಯುವತಿಯನ್ನ ಪತ್ತೆ ಹಚ್ಚಬೇಕು. ಸಿಡಿ ಕೇಸ್ನ ಸತ್ಯಾಂಶ ಬಂದ ಮೇಲೆ ಎಲ್ಲವೂ ಗೊತ್ತಾಗಲಿದೆ. ಪೊಲೀಸರು ಆದಷ್ಟುಬೇಗ ಸತ್ಯಾಂಶ ರಾಜ್ಯದ ಜನತೆಗೆ ತಿಳಿಸಲಿ. ಯುವತಿ ಬಂದು ಹೇಳಿಕೆ ಕೊಟ್ಟ ಬಳಿಕ ಕ್ರಮ ಕೈಗೊಳ್ಳಬೇಕು. ಸಿಡಿ ಕೇಸ್ ಬಿಜೆಪಿ, ಕಾಂಗ್ರೆಸ್ಗೆ ಪ್ಲಸ್, ಮೈನಸ್ ಆಗಲ್ಲ ಎಂದು ಬೆಳಗಾವಿ ‘ಕೈ’ ಅಭ್ಯರ್ಥಿ ಹಾಗೂ ರಮೇಶ್ ಸಹೋದರ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ಡಿ.ಕೆ. ಶಿವಕುಮಾರ್ ಬೆಳಗಾವಿಗೆ ಬರಲು ಕೆಲ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿದೆ. ಅಶ್ಲೀಲ ಸಿಡಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷರ ಹೆಸರು ಕೇಳಿಬಂದ ಹಿನ್ನೆಲೆ ಕೆಲ ಕಾರ್ಯಕರ್ತರು ಶಿವಕುಮಾರ್ ಭೇಟಿ ವಿರೋಧಿಸಿದ್ದಾರೆ. ಈ ಬಗ್ಗೆಯೂ ಸತೀಶ್ ಜಾರಕಿಹೊಳಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಕೆಲ ಕಾರ್ಯಕರ್ತರ ಹೇಳಿಕೆ ಅವರ ವೈಯಕ್ತಿಕ ವಿಚಾರ. ರಮೇಶ್ ಬೆಂಬಲಿಗರ ಪ್ರತಿಭಟನೆಗೂ, ನಮಗೂ ಸಂಬಂಧವಿಲ್ಲ. ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ರಮೇಶ್ ಬೆಂಬಲಿಗರು, ಬೆಂಗಳೂರಲ್ಲಿ ಡಿಕೆಶಿ ಬೆಂಬಲಿಗರು ಪ್ರತಿಭಟನೆ ಮಾಡ್ತಿದ್ದಾರೆ. ನಾವು ಇಂದು ಸಂಜೆ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸುತ್ತೇವೆ. ನಾಳೆ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇವೆ ಎಂದು ಸತೀಶ್ ಹೇಳಿದ್ದಾರೆ.
ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಮೇಶ್ ಬೆಂಬಲಿಗರ ಪ್ರತಿಭಟನೆ
ಬೆಳಗಾವಿಗೆ ಡಿ.ಕೆ.ಶಿವಕುಮಾರ್ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾಕಾರ ರಮೇಶ್ ಬೆಂಬಲಿಗರು ಸಾಂಬ್ರಾ ಏರ್ಪೋರ್ಟ್ ತಲುಪಿದ್ದಾರೆ. ಡಿ.ಕೆ. ಶಿವಕುಮಾರ್ ವಿರುದ್ಧ ಪ್ರತಿಭಟನೆ ನಡೆಸಲು ಆಗಮಿಸಿದ ಬೆಂಬಲಿಗರನ್ನು ಪೊಲೀಸರು ವಿಮಾನ ನಿಲ್ದಾಣದ ಮುಂಭಾಗದಲ್ಲೇ ತಡೆದಿದ್ದಾರೆ. ಗೋಕಾಕ್ ಸೇರಿ ವಿವಿಧ ಕಡೆಗಳಿಂದ ಆಗಮಿಸಿದ ಬೆಂಬಲಿಗರು, ವಿಮಾನ ನಿಲ್ದಾಣದ ಸಮೀಪವಿರುವ ಮೈದಾನದಲ್ಲಿ ಜಮಾವಣೆಗೊಂಡಿದ್ದಾರೆ.
ಡಿ.ಕೆ. ಶಿವಕುಮಾರ್ ಬಂಧಿಸುವಂತೆ ಬೆಂಬಲಿಗರ ಘೋಷಣೆ
ಸಾಂಬ್ರಾ ಏರ್ಪೋರ್ಟ್ ಬಳಿ ಧರಣಿ ನಡೆಸುತ್ತಿರುವ ರಮೇಶ್ ಬೆಂಬಲಿಗರು ಕಪ್ಪುಬಾವುಟ ಹಿಡಿದು ‘ಗೋ ಬ್ಯಾಕ್ ಡಿಕೆಶಿ’ ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ಏರ್ಪೋರ್ಟ್ ಸಮೀಪವಿರುವ ಮೈದಾನದಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 08:26 pm
Mangalore Correspondent
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
ಧರ್ಮಸ್ಥಳ ಸ್ನಾನಘಟ್ಟದ ಬಳಿಕ ಹೊಸ ಜಾಗ ಗುರುತಿಸಿದ ದೂ...
08-08-25 04:42 pm
Full Powers, Dharmasthala SIT, Police: ಧರ್ಮಸ...
08-08-25 01:19 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm