ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm