ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
11-12-25 10:57 pm
Bangalore Correspondent
Kalaburgi Accident, Three Killed: ರಾಜ್ಯದಲ್ಲಿ...
11-12-25 10:47 pm
ಗಾಂಜಾಕ್ಕಾಗಿ ಕಾರವಾರ ಜೈಲಿನಲ್ಲಿ ಕೈದಿಗಳ ಗಲಾಟೆ ; ಜ...
11-12-25 08:03 pm
Padubidri, Accident: ಪಡುಬಿದ್ರಿಯಲ್ಲಿ ಮತ್ತೊಂದು...
11-12-25 03:29 pm
ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಪರೀಕ್ಷೆ ಬರೆದ ವಿದ್ಯಾರ...
11-12-25 12:44 pm
11-12-25 04:24 pm
HK News Desk
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
ಭಾರತೀಯರಿಗೆ ಸಂತಸದ ಸುದ್ದಿ ; ಯುನೆಸ್ಕೋ ಪಟ್ಟಿಗೆ ದೀ...
10-12-25 01:17 pm
11-12-25 10:55 pm
Mangalore Correspondent
ದೈವದ ಚಾಕರಿ ಮಾಡುವವರಿಗೆ ಮಾಸಾಶನ, ಸರ್ಕಾರಿ ಸವಲತ್ತು...
11-12-25 04:21 pm
ದ್ವೇಷ ಭಾಷಣ ಪ್ರಕರಣ ; ಕಡೆಗೂ ಆರೆಸ್ಸೆಸ್ ಮುಖಂಡ ಪ್ರ...
10-12-25 11:04 pm
ಮಂಗಳೂರಿನಲ್ಲಿ ಆರು ತಿಂಗಳಿನಿಂದ ಡ್ರಗ್ಸ್ ಬೇಟೆ ; ಕಾ...
10-12-25 10:51 pm
Bharath Kumdel, Instagram, Target Group: ಭರತ್...
10-12-25 08:45 pm
11-12-25 09:53 pm
HK News Desk
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm
ಪುತ್ತೂರಿನಲ್ಲಿ ನಿಲ್ಲಿಸಿದ್ದ ಲಾರಿಯಿಂದ 21 ಲಕ್ಷ ಮೌ...
09-12-25 04:33 pm
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am