ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm