ಬ್ರೇಕಿಂಗ್ ನ್ಯೂಸ್
28-03-21 07:21 pm Headline Karnataka News Network ಕರ್ನಾಟಕ
ಬಳ್ಳಾರಿ, ಮಾ.28: ಪಕ್ಷದಲ್ಲಿ ಕೆಲವು ವಿಚಾರಗಳಿಂದಾಗಿ ವಿಚಲಿತವಾಗಿದೆ. ಆದರೆ ಅದರಲ್ಲಿ ನಮ್ಮ ತಪ್ಪಿಲ್ಲ. ಅದು ಮಾಡಿರೋರು ಹಾಗೂ ಮಾಡಿಸಿದೋರು ಅನುಭವಿಸುತ್ತಾರೆ, ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಹಾಗೂ ಚಿತ್ರ ನಟ ಜಗ್ಗೇಶ್ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಕಾಂಗ್ರೆಸ್ ಗೆ ಸೇರಬೇಕೆಂದು ಹೋದವನಲ್ಲ. ಆದರೆ ಡಿಕೆಶಿ ಅವರು ನನ್ನ ಒಳ್ಳೆಯ ಸ್ನೇಹಿತರು, ಅವರ ಕಾರಣದಿಂದ ನಾನು ರಾಜಕೀಯಕ್ಕೆ ಬಂದಿದ್ದೇನೆ. ನನ್ನನ್ನು ತುರುವೇಕೆರೆ ಕ್ಷೇತ್ರದಲ್ಲಿ ನಿಲ್ಲಿಸಿದ್ದರು. ಅಲ್ಲಿ ನಾನು ಸೋಲು ಅನುಭವಿಸಿದೆ. ನನ್ನ ಮನೆ, ಮಠಗಳನ್ನು ಮಾರಿಕೊಂಡು ರಾಜಕಾರಣ ಮಾಡಿದೆ. ಇದರ ಮಧ್ಯೆ ಎಂಡಿ ಲಕ್ಷ್ಮಿ ನಾರಾಯಣ ಎನ್ನುವ ವ್ಯಕ್ತಿ , ನನ್ನ ಜೀವನಕ್ಕೆ ಬೆಂಕಿ ಇಟ್ಟರು. ಕಾಂಗ್ರೆಸ್ ನಲ್ಲಿದ್ದಾಗ ಕಾಂಗ್ರೆಸ್ ನ ಕೋಟ್ಯಾಂತರ ಹಣ ಕೊಳ್ಳೆ ಹೊಡೆದುಕೊಂಡು ಹೋಗಿದ್ದಾನೆ ಎಂದು ನನ್ನ ಮಾನ ಮರ್ಯಾದೆ ಹರಾಜು ಹಾಕಿದ ವ್ಯಕ್ತಿ ಎಂದು ಜಗ್ಗೇಶ್ ಹಳೆಯ ನೆನಪನ್ನು ಮೆಲುಕು ಹಾಕಿದರು.

ಆದರೆ ಅಲ್ಲಿಂದ ರಾಜಕಾರಣ ಬೇಡ ಎಂದು ಬರುತ್ತಿದ್ದವನಿಗೆ ನನ್ನ ಅಭಿಮಾನಿಗಳು ತಡೆದು ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ಒತ್ತಾಯಿಸಿದರು. ನಂತರ ನಾನು ಕೂಡ ನಿಂತು ಗೆದ್ದೆ, ಶಾಸಕನಾದೆ, ವಿಧಾನ ಪರಿಷತ್ ಸದಸ್ಯನಾದೆ. ಆದರೆ ನಾನು ಯಾವಾಗಲೂ ಅಧಿಕಾರಕ್ಕಾಗಿ ಅಂಟಿ ಕುಳಿತುಕೊಳ್ಳಲಿಲ್ಲ. ನನಗೆ 2014 ರಿಂದ ಯಾವುದೇ ಅಧಿಕಾರವಿಲ್ಲ. ನಾನು ಒಬ್ಬ ಸಂಘಟಕನಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.
ಆದರೆ ಇಂತಹ ಪಕ್ಷಕ್ಕೆ ತೊಂದರೆ ಕೊಡಲು ಯಾರೇ ಎಷ್ಟು ಪ್ರಯತ್ನ ಪಟ್ಟರೂ ಅದು ನಡೆಯುವುದಿಲ್ಲ. ಬಿಜೆಪಿಯ ರಥ ನಿರಂತರವಾಗಿ ಸಾಗುತ್ತದೆ ಎಂದರು.
Kannada actor jaggesh remembers his past bad experiences in congress party talking to the media persons in Bellary.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm