ಬ್ರೇಕಿಂಗ್ ನ್ಯೂಸ್
28-03-21 10:23 pm Headline Karnataka News Network ಕರ್ನಾಟಕ
ಮಂಗಳೂರು, ಮಾ.28: ಡಿ.ಕೆ.ಶಿವಕುಮಾರ್ ಅವರಿಗೆ ಬೆಳಗಾವಿಯಲ್ಲಿ ಯಾರೂ ಚಪ್ಪಲಿ ಎಸೆದಿಲ್ಲ. ಹಿಂದುಗಡೆಯಲ್ಲಿದ್ದ ಕೊನೆಯ ಭಾಗದ ವಾಹನಕ್ಕೆ ಎಸೆದಿರಬಹುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಲ್ಲಿಯ ಕಮಿಷನರ್ ಗೆ ಈಗಾಗ್ಲೇ ಸೂಚನೆ ಕೊಟ್ಟಿದ್ದೇನೆ. ಬೆಳಗಾವಿಯಲ್ಲಿ ಯಾವುದೇ ಸಣ್ಣ ಘಟನೆ ಕೂಡ ಆಗಬಾರದು. ಬೆಳಗಾವಿಗೆ ಯಾರೆಲ್ಲಾ ಬರ್ತಾರೆ, ಅವರಿಗೆಲ್ಲಾ ಭದ್ರತೆ ನೀಡಬೇಕು. ಯಾರು ಕಾನೂನು ಕೈಗೆತ್ತಿಕೊಳ್ತಾರೆ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್ ನವರು ಆರೋಪ ಮಾಡುತ್ತಿರುವ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ಕಾಂಗ್ರೆಸ್ ನವರು ಏನು ಹೇಳ್ತಾರೆ. ಇನ್ನೊಬ್ಬರು ಏನ್ ಹೇಳ್ತಾರೆ. ಅದು ಇಂಪಾರ್ಟಂಟ್ ಅಲ್ಲ. ಕಾನೂನು ಬದ್ದವಾಗಿ ನಾವು ತನಿಖೆ ಮಾಡುತ್ತೇವೆ.
ಯಾರೂ ಏನು ಹೇಳಿಕೆ ಕೊಟ್ರು ಅದು ನಮಗೆ ಸಂಬಧಪಟ್ಟಿದ್ದಲ್ಲ. ಕಾಂಗ್ರೆಸ್ ನವರು ಈ ಹಿಂದೆ ಮೇಟಿ ಪ್ರಕರಣದಲ್ಲಿ ಹೇಗೆ ನಡ್ಕೊಂಡ್ರು ಎನ್ನೋದು ಚೆನ್ನಾಗಿ ಗೊತ್ತು.

ಪ್ರಕರಣದಲ್ಲಿ ಕೇಸ್ ಕೂಡ ಬುಕ್ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ನವರ ಹೇಳಿಕೆಗೆ ನಾನು ಮಹತ್ವ ಕೊಡೋದಿಲ್ಲ. ಎಸ್ಐಟಿ ಯಲ್ಲಿ ದಕ್ಷ ಅಧಿಕಾರಿಗಳಿದ್ದಾರೆ, ಕಾನೂನುಬದ್ದವಾಗಿ ಕೆಲಸ ಮಾಡುತ್ತಾರೆ. ಯಾರ ಪ್ರಭಾವಕ್ಕೆ ಮಣಿದು ಕೆಲಸ ಮಾಡೋದಿಲ್ಲ. ಹಲವಾರು ಸಿಡಿ, ವೀಡಿಯೋ, ಆಡಿಯೋ ಬಂದಿದೆ. ಅದೆಲ್ಲವನ್ನು ವೈಜ್ಞಾನಿಕ ತನಿಖೆಗೆ ಒಳಪಡಿಸಿದ್ದೇವೆ. ಪ್ರಕರಣ ತನಿಖೆ ಹಂತದಲ್ಲಿ ಇರುವಾಗ ನಾನು ಏನೂ ಹೇಳಲು ಇಚ್ಚೆಪಡಲ್ಲ. ಆದ್ರೆ ಒಟ್ಟಾರೆ ತನಿಖೆ ಯಾವುದೇ ಪ್ರಭಾವಕ್ಕೆ ಒಳಗಾಗಲ್ಲ ಅನ್ನೋದು ಸ್ಪಷ್ಟ ಪಡಿಸುತ್ತೇನೆ ಎಂದು ಹೇಳಿದರು.
#WATCH: BJP MLA Ramesh Jarakiholi's supporters attacked the convoy of State Congress chief DK Shivakumar in Belgavi, Karnataka pic.twitter.com/uuyDvJKruv
— ANI (@ANI) March 28, 2021
Karnataka home minister Basavaraj Bommai said that chappals were not hurled at the car of KPCC president DK Shivakumar in Belagavi.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm