ಬ್ರೇಕಿಂಗ್ ನ್ಯೂಸ್
29-03-21 11:01 am Headline Karnataka News Network ಕರ್ನಾಟಕ
ಬಾಗಲಕೋಟೆ,ಮಾ.29: ಗೆಳೆಯರ ಹುಟ್ಟುಹಬ್ಬ ಆಚರಿಸಿ ವಾಪಸ್ ಬರುವಾಗ ಕಾರಿಗೆ ಹಿಂಬದಿಯಿಂದ ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಬೇವಿನಮಟ್ಟಿ ಬಳಿ ದುರ್ಘಟನೆ ನಡೆದಿದ್ದು, ಕಾರಿನ ಚಾಲಕನಿಗೆ ಗಂಭೀರ ಗಾಯವಾಗಿದೆ. ಹತ್ತಿರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಐವರು ಕಾರಿನಲ್ಲಿ ಸ್ನೇಹಿತನ ಹುಟ್ಟುಹಬ್ಬ ಆಚರಿಸಲು ತೆರಳಿದ್ದರು. ಹಿಂಬರುವಾಗ ಬಾಗಲಕೋಟೆಯಿಂದ ಹುನಗುಂದ ಮಾರ್ಗವಾಗಿ ಹೊರಟಿದ್ದರು. ಹುನಗುಂದ ತಾಲ್ಲೂಕಿನ ಬೇವಿನಮಟ್ಟಿ ಕ್ರಾಸ್ ಬಳಿ ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ.

ಈ ಪರಿಣಾಮವಾಗಿ ಕಾರಿನಲ್ಲಿದ್ದ ಚಂದ್ರಶೇಖರ್(30), ಬಸವರಾಜ(32), ನವೀನ ಸಾಕಾ(40) ಹಾಗೂ ಚೆನ್ನಬಸವ ಅಂಜಿ(22) ಮರಣ ಹೊಂದಿದ್ದಾರೆ. ಕಾರಿನ ಚಾಲಕ ವಿಜಯ ಬಂಡಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ಹೊಡೆದ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ.
ಗಾಯಾಳು ವಿಜಯ ಬಂಡಿ ಹಾಗೂ ಮರಣ ಹೊಂದಿದ ನಾಲ್ವರು ಇಳಿಕಲ್ ನಗರದವರು ಎಂಬುದು ತಿಳಿದು ಬಂದಿದೆ. ಗಾಯಾಳುವನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಲಾರಿ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.
Four dead in a tragic road accident in Bagalkot while they were returning back from friends birthday party.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm