ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 11:56 am
HK News Staffer
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm