ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm