ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.
ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm