ಬ್ರೇಕಿಂಗ್ ನ್ಯೂಸ್
29-03-21 05:15 pm Headline Karnataka News Network ಕರ್ನಾಟಕ
ಬೆಂಗಳೂರು, ಮಾ.29: ಶಿವಮೊಗ್ಗದ ಸ್ಫೋಟ ಪ್ರಕರಣದ ಬಳಿಕ ನಿಂತು ಹೋಗಿರುವ ಗಣಿಗಳನ್ನು ಮತ್ತೆ ಪುನರಾರಂಭಿಸಲು ಷರತ್ತುಬದ್ಧ ಅನುಮತಿ ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗಣಿಗಳನ್ನು ಪುನರ್ ಆರಂಭಿಸುವವರು 90 ದಿನಗಳ ಒಳಗೆ ಗಣಿ ಮತ್ತು ಸುರಕ್ಷತಾ ವಿಭಾಗದ ಮಹಾನಿರ್ದೇಶಕರಿಂದ (ಡಿಜಿಎಂಎಸ್) ಅನುಮತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಡಿಜಿಎಂಎಸ್ ಪರವಾನಗಿ ಪಡೆದು ನಡೆಯುವ ಗಣಿಗಳು ಕೇವಲ ಹತ್ತು ಶೇಕಡಾ ಅಷ್ಟೇ. ಉಳಿದ 90 ಶೇಕಡಾ ಗಣಿಗಳು ಈ ಅನುಮತಿಯನ್ನು ಹೊಂದಿಲ್ಲ. ಈ ರೀತಿ ಅನುಮತಿ ಪಡೆಯದ ಕಲ್ಲಿನ ಕೋರೆಗಳೇ ರಾಜ್ಯದಲ್ಲಿ 2500ಕ್ಕೂ ಹೆಚ್ಚು ಇದೆ. ಡಿಜಿಎಂಎಸ್ ಅನುಮತಿ ಪಡೆಯದ ಹೊರತು ಕಲ್ಲಿನ ಕೋರೆ ಪುನರಾರಂಭ ಸಾಧ್ಯವಿಲ್ಲ ಎಂದು ನಿರಾಣಿ ತಿಳಿಸಿದ್ದಾರೆ.

ಗಣಿಗಳ ಚಟುವಟಿಕೆ ನಿಂತು ಹೋದ ಕಾರಣ 300 ಕೋಟಿಯಷ್ಟು ನಷ್ಟವಾಗಿದೆ. ಹಲವಾರು ಗಣಿಗಳಲ್ಲಿ ಕಾರ್ಮಿಕರನ್ನು ತೆಗೆದು ಹಾಕಿದ್ದು, ಉದ್ಯೋಗ ನಷ್ಟವಾಗಿದೆ. ಗಣಿ ಸ್ಥಗಿತಗೊಂಡ ಕಾರಣ ಕಟ್ಟಡಗಳ ನಿರ್ಮಾಣ ಕಾರ್ಯ ನಿಂತು ಹೋಗಿದ್ದು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಹೀಗಾಗಿ ಒಂದೆಡೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ನಷ್ಟವಾಗಿದೆ. ಇದರಿಂದಾಗಿ ಗಣಿ ಚಟುವಟಿಕೆಯಲ್ಲಿ ತೊಡಗಿರುವ ಮಂದಿ ಗಣಿಗಾರಿಕೆ ಪುನರಾರಂಭಿಸಲು ಕೋರಿದ್ದಾರೆ. ಈ ಬಗ್ಗೆ ಸಿಎಂ ಜೊತೆ ಸಭೆ ನಡೆಸಿದ್ದು, ಯಾವುದೇ ಕಾರಣಕ್ಕೂ ಡಿಜಿಎಂಎಸ್ ಅನುಮತಿ ಇಲ್ಲದೆ ಗಣಿಗಾರಿಕೆ ನಡೆಸಲು ಅವಕಾಶ ನೀಡಿಲ್ಲ.
ಡಿಜಿಎಂಎಸ್ ಅನುಮತಿಯಿಲ್ಲದೆ ಸ್ಫೋಟಕಗಳನ್ನು ಖರೀದಿಸಲು ಮತ್ತು ಇರಿಸಿಕೊಳ್ಳಲು ಗಣಿಗಳಿಗೆ ಅವಕಾಶ ಇಲ್ಲ. ಎರಡು ಕೆಜಿಯಷ್ಟು ಸ್ಫೋಟಕ ಗಣಿಗಳಲ್ಲಿ ಬಳಸಲು ಡಿಜಿಎಂಎಸ್ ಅನುಮತಿ ಬೇಕಿಲ್ಲ ಎಂದರು.
quarries that were inactive after quarry blast will now go active in Karnataka minister Murugesh Nirani
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm