ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm