ಬ್ರೇಕಿಂಗ್ ನ್ಯೂಸ್
29-03-21 10:42 pm Headline Karnataka News Network ಕರ್ನಾಟಕ
ಹಾಸನ, ಮಾ 29: ಶಿರಾಡಿ ಘಾಟ್ ಸಮೀಪದ ಮಾರನಹಳ್ಳಿ ಗಡಿ ಭಾಗದಲ್ಲಿ ಓಡಾಡುತ್ತಿದ್ದ ಒಂಟಿಸಲಗ, ಇಂದು ಬೆಂಗಳೂರು- ಮಂಗಳೂರು ರೈಲ್ವೆ ಹಳಿ ಮೇಲೆ ನಡೆದು ಬರುವ ಮೂಲಕ ಕೆಲಕಾಲ ಆತಂಕ ಸೃಷ್ಟಿ ಮಾಡಿತ್ತು.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮರಿ ರೈಲ್ವೆ ನಿಲ್ದಾಣದ ಸಮೀಪ ಇರುವ 60/600 ರ ಮೈಲಿಗಲ್ಲಿನ ಸುರಂಗ ಮಾರ್ಗದಿಂದ ಒಂಟಿ ಸಲಗವೊಂದು ರಾಜಾರೋಷವಾಗಿ ನಡೆದುಕೊಂಡು ಬರುವ ಮೂಲಕ ಆ ಭಾಗದ ಜನರಿಗೆ ಆತಂಕ ಸೃಷ್ಟಿಸಿದೆ.
ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬರುತ್ತಿದ್ದ ಕಾಡಾನೆಯಿಂದ ರೈಲ್ವೆ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬಂದಿ ಕೂಡ ಭಯಭೀತರಾಗಿದ್ದಾರೆ. ಆನೆ ಸಂಚಾರ ಮಾಡಿದ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಣ ಮಾಡಿದ್ದು, ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
2020ರಲ್ಲಿ ಆನೆಯೊಂದು ರೈಲ್ವೆ ಹಳಿ ಮೇಲೆ ದಾಟುವಾಗ ರೈಲಿಗೆ ಸಿಲುಕಿ ಸಾವಿಗೀಡಾಗಿತ್ತು. ಇದರ ಬೆನ್ನಲ್ಲೇ ಈಗ ಆನೆ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಬಂದಿರುವುದು, ಅದರಲ್ಲೂ ಸುರಂಗಮಾರ್ಗದ ಒಳಗಡೆಯಿಂದ ಆನೆ ಹೊರ ಬಂದಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿತ್ತು. ಒಂದು ವೇಳೆ ಇದೇ ವೇಳೆಗೆ ಮಂಗಳೂರಿನಿಂದ ಅಥವಾ ಬೆಂಗಳೂರಿನಿಂದ ರೈಲು ಸಂಚಾರವಿರುತ್ತಿದ್ದರೆ ಆನೆ ಅಪಘಾತದಲ್ಲಿ ಸಾವಿಗೀಡಾಗುತ್ತಿತ್ತು.
Elephant walks on railway track near shiradi ghats of Bengaluru - Mangalore. The video of this has gone viral on social media.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm