ಬ್ರೇಕಿಂಗ್ ನ್ಯೂಸ್
22-08-20 01:05 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 22: ಕರ್ತವ್ಯ ನಿರ್ವಹಿಸುವ ವೇಳೆ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಪಾಲನೆ ಮಾಡದೆ ಪಾರ್ಕ್ನಲ್ಲಿ ಗುಂಪು ಸೇರಿದ್ದ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಿ ಸಂಚಾರ ವಿಭಾಗದ ಡಿಸಿಪಿ ಸೌಮ್ಯಲತಾ ಆದೇಶ ಹೊರಡಿಸಿದ್ದಾರೆ.
ಜಾಲಹಳ್ಳಿ ಸಂಚಾರ ಠಾಣೆಯ ಎಎಸ್ಐ ಮಂಜುನಾಥಯ್ಯ, ಹೆಡ್ ಕಾನ್ಸ್ಟೇಬಲ್ ನಾಗರಾಜು, ಕಾನ್ಸ್ ಟೇಬಲ್ಗಳಾದ ಪದ್ಮನಾಭ್, ಮಧುಸೂಧನ್, ವಿಶ್ವನಾಥ್ ಹಾಗೂ ಮಹಿಳಾ ಕಾನ್ಸ್ಟೇಬಲ್ ಸುಜನಾ ಅಮಾನತುಗೊಂಡವರು
ಜಾಲಹಳ್ಳಿ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಆಗಸ್ಟ್ 11ರಂದು ಈ ಆರು ಸಿಬ್ಬಂದಿಯನ್ನು ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದರು. ಕೋಬ್ರಾ ಡ್ಯೂಟಿಗೆ, ಜಾಲಹಳ್ಳಿ ಜಂಕ್ಷನ್, ಗಂಗಮ್ಮನ ವೃತ್ತ, ಸಾಹಿತ್ಯ ಕೂಟ ಜಂಕ್ಷನ್ ಸೇರಿ ಹಲವೆಡೆ ಸಂಚಾರ ನಿರ್ವಹಣೆಯ ಕರ್ತವ್ಯಕ್ಕೆ ಇವರನ್ನು ನಿಯೋಜಿಸಲಾಗಿತ್ತು. ಆ ವೇಳೆ ಹಿರಿಯ ಅಧಿಕಾರಿಗಳು ಕೊರೊನಾ ಸಂಬಂಧ ಅಗತ್ಯ ಮುಂಜಾಗ್ರತಾ ಕ್ರಮ ವಹಿಸುವಂತೆ ಸೂಚಿಸಿದ್ದು, ಅವರ ಸಲಹೆಯನ್ನು ಲೆಕ್ಕಿಸದೇ ನಿರ್ಲಕ್ಷ್ಯ ಮಾಡಿ, ಈ 6 ಮಂದಿ ಸಾಹಿತ್ಯ ಕೂಟ ಬಳಿಯ ಪಾರ್ಕ್ನಲ್ಲಿ ಗುಂಪು ಸೇರಿದ್ದರು ಎನ್ನಲಾಗಿದೆ.
ಈ ವೇಳೆ ಮಾಸ್ಕ್ ಧರಿಸಿಲ್ಲ ಹಾಗೂ ವ್ಯಕ್ತಿಗತ ಅಂತರ ಕಾಯ್ದುಕೊಂಡಿರಲಿಲ್ಲ ಎಂಬ ಮಾಹಿತಿ ಪಡೆದ ಡಿಸಿಪಿ ಸೌಮ್ಯಲತಾ, ಕರ್ತವ್ಯದ ವೇಳೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಸಿಬ್ಬಂದಿಯನ್ನ ಅಮಾನತು ಮಾಡಿದ್ದಾರೆ. ಹಾಗೂ ಅಮಾನತು ಅವಧಿಯಲ್ಲಿ ಖಾಸಗಿ ನೌಕರಿ ಭತ್ಯೆ ಹಾಗೂ ವ್ಯವಹಾರ ಮಾಡಿದರೆ ಜೀವನ ಭತ್ಯೆ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಖಡಕ್ ಎಚ್ಚರಿಕೆಯನ್ನು ಸಹ ನೀಡಿದ್ದಾರೆ.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm