ಬ್ರೇಕಿಂಗ್ ನ್ಯೂಸ್
31-03-21 12:13 pm Headline Karnataka News Network ಕರ್ನಾಟಕ
ಬೆಂಗಳೂರು, ಮಾರ್ಚ್ 31: ಕೆಂಪೇಗೌಡ ಏರ್ಪೋರ್ಟ್ನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಟ್ಯಾಕ್ಸಿ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಾಡಿಗೆ ದೊರೆಯದೆ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ಚನ್ನಪಟ್ಟಣ ಮೂಲದ ಪ್ರತಾಪ್ಕುಮಾರ್ (32) ಆತ್ಮಹತ್ಯೆ ಮಾಡಿಕೊಂಡ ಟ್ಯಾಕ್ಸಿ ಚಾಲಕ.
ಲಾಕ್ಡೌನ್ ನಂತರ ಬಾಡಿಗೆ ದರ ಕಡಿಮೆಯಿದ್ದು, ಟ್ಯಾಕ್ಸಿ ಹಾಗೂ ಕ್ಯಾಬ್ಗಳಿಗೆ ಪ್ರಸ್ತುತ ಒಂದು ಕಿ.ಮೀ.ಗೆ 24 ರೂ. ದರ ನಿಗದಿ ಮಾಡಬೇಕು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಚಾಲಕರು ಮತ್ತು ಮಾಲೀಕರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿತ್ತು.
ಕೊರೊನಾದಿಂದಾಗಿ ಕಳೆದ ಒಂದು ವರ್ಷದಿಂದ ಸರಿಯಾಗಿ ಬಾಡಿಗೆ ಸಿಗುತ್ತಿರಲಿಲ್ಲ, ಹೀಗಾಗಿ ಖಿನ್ನತೆಗೆ ಒಳಗಾಗಿದ್ದ, ಮನೆಯ ನಿರ್ವಹಣೆ ಹೇಗೆ ಎಂಬ ಚಿಂತೆ ಕಾಡುತ್ತಿತ್ತು, ಏರ್ಪೋರ್ಟ್ ಸಮೀಪ ಟ್ಯಾಕ್ಸಿಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ, ಬಳಿಕ ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಫೆ.1ರಂದು ಕ್ಯಾಬ್, ಟ್ಯಾಕ್ಸಿ, ಓಲಾ, ಊಬರ್ಗಳಿಗೂ ಅನ್ವಯವಾಗುವಂತೆ 1 ಕಿ.ಮೀ.ಗೆ 24 ರೂ.ದರ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿತ್ತು . ಸರ್ಕಾರ ನಿಗದಿ ಮಾಡಿದ ದರವನ್ನು ಕೆಎಸ್ಟಿಡಿಸಿ, ಮೆರು ಮತ್ತು ಮೇಘ ಕಂಪನಿಯ ಕ್ಯಾಬ್ ಚಾಲಕರು ಅಳವಡಿಸಿಕೊಂಡಿದ್ದರು. ಜತೆಗೆ ಮೀಟರ್ ಹಾಕುವ ಮೂಲಕ ಪ್ರಯಾಣಿಕರಿಗೆ ಸೇವೆ ಒದಗಿಸಲಾಗುತ್ತಿತ್ತು.
ಆದರೆ, ಓಲಾ ಮತ್ತು ಉಬರ್ನ ವಾಹನಗಳು ವಿಮಾನ ನಿಲ್ದಾಣದಿಂದ ನಗರಕ್ಕೆ ಒಂದು ಕಿ.ಮೀ.ಗೆ ಕೇವಲ 9 ರೂ. ನಂತೆ ಓಡಿಸುತ್ತಿದ್ದವು. ನಗರದಿಂದ ವಾಪಸ್ ವಿಮಾನ ನಿಲ್ದಾಣಕ್ಕೆ ಬರುವಾಗ ಪ್ರತಿ ಕಿ.ಮೀ.ಗೆ 35ರೂ. ನಿಗದಿ ಮಾಡಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದರು.
ಹೀಗಾಗಿ ಸುಮಾರು 18 ಗಂಟೆ ಕಳೆದರೂ ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಒಂದು ಬಾಡಿಗೆಯೂ ದೊರೆಯುತ್ತಿರಲಿಲ್ಲ. ಓಲಾ ಮತ್ತು ಊಬರ್ ದರ ಕಡಿಮೆ ಎಂದು ಪ್ರಯಾಣಿಕರು ಅತ್ತ ಹೋಗುತ್ತಿದ್ದರು ಎಂದು ಹೇಳಲಾಗಿದೆ.
A driver attempted suicide by setting himself ablaze inside his cab at Kempegowda International Airport on Tuesday. Pratap, 34, is said to be dead in the hospital and he is from Ramanagara.
08-08-25 06:23 pm
HK News Desk
Bigg Boss Rajath, Death Threats, Soujanya: ಯೂ...
08-08-25 11:20 am
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 11:10 pm
Mangalore Correspondent
SIT, Kalleri, Buried Schoolgirl, Dharmasthala...
08-08-25 09:25 pm
ಧರ್ಮಸ್ಥಳ ಸುದ್ದಿ ಪ್ರಸಾರ ನಿರ್ಬಂಧಕ್ಕೆ ಸುಪ್ರೀಂ ನಿ...
08-08-25 08:26 pm
Bjp, Mangalore: ಎಡಪಂಥೀಯರು ಧರ್ಮಸ್ಥಳ ಕ್ಷೇತ್ರಕ್ಕ...
08-08-25 08:05 pm
Mangalore Safest City; ಕಡಿಮೆ ಕ್ರೈಮ್ ರೇಟ್, ಮಹಿ...
08-08-25 05:54 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm