ಬ್ರೇಕಿಂಗ್ ನ್ಯೂಸ್
22-08-20 02:43 pm Mysore Reporter ಕರ್ನಾಟಕ
ಮೈಸೂರು, ಆಗಸ್ಟ್ 22: ತೀವ್ರ ಸಂಚಲನ ಸೃಷ್ಟಿಸಿರುವ ನಂಜನಗೂಡು ಟಿಎಚ್ಓ ಡಾ.ನಾಗೇಂದ್ರ ಆತ್ಮಹತ್ಯೆ ಪ್ರಕರಣಕ್ಕೆ ದಂಬಂಧಿಸಿದಂತೆ ಜಿ.ಪಂ. ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಸಿಇಒ ಪ್ರಶಾಂತ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ದೂರು ದಾಖಲಾದ ಹಿನ್ನೆಲೆ ಐಪಿಸಿ ಸೆಕ್ಷನ್ 306 ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಡಾ.ನಾಗೇಂದ್ರ ತಂದೆ ರಾಮಕೃಷ್ಣ ಅವರು ಮಗನ ಆತ್ಮಹತ್ಯೆ ಕುರಿತು ದೂರು ದಾಖಲಿಸಿದ್ದರು.
ದೂರಿನಲ್ಲಿ ತಮ್ಮ ಮಗನ ಮೇಲೆ ಒತ್ತಡ ಇರುವುದರ ಬಗ್ಗೆ ತಂದೆ ಆರೋಪಿಸಿದ್ದಾರೆ. ಡಾ.ನಾಗೇಂದ್ರ ಅವರಿಗೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕ್ರಮ ಕೈಗೋಳ್ಳುತ್ತೇವೆ ಎಂದು ಅಧಿಕಾರಿ ಹೆದರಿಸುತ್ತಿದ್ದರು ಎಂದು ತಂದೆ ಆರೋಪಿಸಿದ್ದಾರೆ. ನಾಗೇಂದ್ರ ತಂದೆ ರಾಮಕೃಷ್ಣ ಅವರ ದೂರಿನ ಅನ್ವಯ ಸಿಇಓ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಡಾ.ನಾಗೇಂದ್ರ ಕುಟುಂಬಕ್ಕೆ ಸರ್ಕಾರ 30 ಲಕ್ಷ ರೂ.ಗಳ ಪರಿಹಾರ ಘೋಷಿಸಿದ್ದು, ನಾಗೇಂದ್ರ ಪತ್ನಿಗೆ ಉನ್ನತ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕಿ ಹುದ್ದೆ ನೀಡಲಾಗುವುದು. ತನಿಖೆ ನಡೆಸಿ ಅಧಿಕಾರಿ ವಿರುದ್ಧ ಸಹ ಕ್ರಮ ಕೈಗೊಳ್ಳಲಾಗುವುದು. ಇದು ಉದ್ದೇಶಪೂರ್ವಕವಾಗಿ ನಡೆದ ಘಟನೆಯಲ್ಲ. ಎಲ್ಲರಿಗೂ ಕೆಲಸದ ಒತ್ತಡವಿರುತ್ತದೆ. ಕೆಲಸದ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿದ್ದಾರೆ.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm