ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 09:15 pm
Mangalore Correspondent
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am