ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm