ಬ್ರೇಕಿಂಗ್ ನ್ಯೂಸ್
04-04-21 09:13 pm Headline Karnataka News Network ಕರ್ನಾಟಕ
ಮಂಗಳೂರು, ಏಪ್ರಿಲ್ 4 : ಬೆಂಗಳೂರು- ಮಂಗಳೂರು ನಡುವೆ ಏಪ್ರಿಲ್ 10ರಿಂದ ಪ್ರತಿದಿನ ಮೂರು ಎಕ್ಸ್ಪ್ರೆಸ್ ರೈಲುಗಳು ಸಂಚಾರ ನಡೆಸಲಿದ್ದು ರಾಜಧಾನಿ ಮತ್ತು ಕರಾವಳಿ ನಡುವೆ ಸಂಚರಿಸುವ ಜನರಿಗೆ ಅನುಕೂಲವಾಗಲಿದೆ.
ಪ್ರತಿದಿನ ಮೂರು ಎಕ್ಸ್ಪ್ರೆಸ್ ರೈಲುಗಳು ಕುಣಿಗಲ್, ಶ್ರವಣಬೆಳಗೊಳ ಮತ್ತು ಹಾಸನ ಮಾರ್ಗವಾಗಿ ಬೆಂಗಳೂರಿನಿಂದ ಮಂಗಳೂರಿಗೆ ಸಂಚಾರ ನಡೆಸಲಿವೆ. ಹಾಸನ- ಶ್ರವಣಬೆಳಗೊಳ- ಚಿಕ್ಕಬಾಣಾವರ ನಡುವೆ ನೂತನ ರೈಲು ಮಾರ್ಗ ನಿರ್ಮಾಣವಾಗಿದ್ದು ಅದೀಗ ಉಪಯೋಗಕ್ಕೆ ಬರುತ್ತಿದೆ.
ಈ ಮೂರು ರೈಲುಗಳ ಜೊತೆ ಬೆಂಗಳೂರು - ಹಾಸನ ನಡುವೆ ಸಂಚರಿಸುತ್ತಿರುವ ಡೆಮೋ ರೈಲು ಜೊತೆಗೆ ಮತ್ತೆರಡು ರೈಲುಗಳ ಸಂಚಾರ ಎಂದಿನಂತೆ ಇರಲಿವೆ. ಸೊಲ್ಹಾಪುರ- ಹಾಸನ ನಡುವೆ ಪ್ರತಿದಿನ ಸಂಚರಿಸುವ ರೈಲು ಸಹ ಏಪ್ರಿಲ್ 10 ರಿಂದ ಆರಂಭವಾಗುತ್ತಿದೆ. ಕೊರೊನಾ ಲಾಕ್ಡೌನ್ ವರ್ಷದ ಬಳಿಕ ಮೊದಲ ಬಾರಿಗೆ ರೈಲು ಪೂರ್ಣ ಮಟ್ಟದಲ್ಲಿ ಸಂಚಾರಕ್ಕೆ ಬರಲಿದೆ.

ಬೆಂಗಳೂರು - ಮಂಗಳೂರು ನಡುವೆ ಶ್ರವಣಬೆಳಗೊಳ ಮಾರ್ಗವಾಗಿ ರಾತ್ರಿ 2 ರೈಲು, ಬೆಳಗ್ಗೆ 1 ರೈಲು ಸಂಚಾರ ನಡೆಸಲಿದೆ. ಬೆಂಗಳೂರು, ಮಂಗಳೂರು, ಹಾಸನ ಜಿಲ್ಲೆಗಳ ನಡುವೆ ಸಂಚರಿಸುವವರಿಗೆ ಸಹಾಯಕವಾಗಲಿದೆ.
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣ (ಮೆಜೆಸ್ಟಿಕ್)ನಿಂದ ಸಂಜೆ 6.40ಕ್ಕೆ ಹೊರಡುವ ರೈಲು 9.30ಕ್ಕೆ ಹಾಸನವನ್ನು ತಲುಪಲಿದೆ. ಮರುದಿನ ಬೆಳಗ್ಗೆ 8.35ಕ್ಕೆ ಕಾರವಾರ ತಲುಪಲಿದೆ. ಈ ರೈಲು ಮಂಗಳೂರು ನಿಲ್ದಾಣಕ್ಕೆ ಹೋಗದೆ ಪಡೀಲ್ ರೈಲು ನಿಲ್ದಾಣದಿಂದ ಕಾರವಾರಕ್ಕೆ ಸಂಚರಿಸಲಿದೆ. ಕಾರವಾರದಿಂದ ಸಂಜೆ 6.30ಕ್ಕೆ ಹೊರಡುವ ರೈಲು ಮರುದಿನ ಬೆಳಗ್ಗೆ 7 ಗಂಟೆಗೆ ಬೆಂಗಳೂರಿನ ಮೆಜೆಸ್ಟಿಕ್ ತಲುಪಲಿದೆ.

ಬೆಂಗಳೂರು-ಹಾಸನ- ಮಂಗಳೂರು
ಪ್ರತಿದಿನ ರಾತ್ರಿ 9.30ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ನಿಂದ ಹೊರಡುವ ರೈಲು 12.30ಕ್ಕೆ ಹಾಸನ ತಲುಪಲಿದೆ. ಮರುದಿನ ಬೆಳಗ್ಗೆ 7.50ಕ್ಕೆ ಮಂಗಳೂರು ಸೆಂಟ್ರಲ್ ನಿಲ್ದಾಣ ತಲುಪಲಿದೆ. ಮಂಗಳೂರಿನಿಂದ ಬೆಳಗ್ಗೆ 8.50ಕ್ಕೆ ಹೊರಡುವ ರೈಲು ಸಂಜೆ 7.30ಕ್ಕೆ ಬೆಂಗಳೂರಿಗೆ ಬಂದು ತಲುಪಲಿದೆ.
ಯಶವಂತಪುರ- ಹಾಸನ-ಮಂಗಳೂರು ರೈಲು
ಬೆಂಗಳೂರು ನಗರದ ಯಶವಂತಪುರದಿಂದ ಪ್ರತಿದಿನ ಬೆಳಗ್ಗೆ 7.10ಕ್ಕೆ ಹೊರಡುವ ಎಕ್ಸ್ಪ್ರೆಸ್ ರೈಲು 10.05ಕ್ಕೆ ಹಾಸನ ತಲುಪಲಿದೆ. ಹಾಸನದಿಂದ ಹೊರಟ ರೈಲು ಸಂಜೆ 4.55ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ವಾರದಲ್ಲಿ 4 ದಿನ ಮಂಗಳೂರು ಜಂಕ್ಷನ್ ಮತ್ತು 3 ದಿನ ಕಾರವಾರದ ತನಕ ಈ ರೈಲು ಸಂಚಾರ ನಡೆಸಲಿದೆ.
ವಾರದ 7 ದಿನವೂ ಸಂಚಾರ
ಇಷ್ಟು ದಿನ ವಾರದಲ್ಲಿ 4 ದಿನ ಕುಣಿಗಲ್, ಶ್ರವಣಬೆಳಗೊಳ ಹಾಸನ ಮಾರ್ಗವಾಗಿ, ವಾರದಲ್ಲಿ ಮೂರು ದಿನ ಮಂಡ್ಯ, ಮೈಸೂರು, ಹಾಸನ ಮಾರ್ಗವಾಗಿ ಸಂಚಾರ ನಡೆಸುತ್ತಿದ್ದ ಎಕ್ಸ್ಪ್ರೆಸ್ ರೈಲು ಏಪ್ರಿಲ್ 10ರಿಂದ ವಾರದ 7 ದಿನವೂ ಬೆಂಗಳೂರಿನಿಂದ ಕುಣಿಗಲ್, ಶ್ರವಣಬೆಳಗೊಳ, ಹಾಸನ ಮಾರ್ಗವಾಗಿ ಮಂಗಳೂರು ಸೆಂಟ್ರಲ್ಗೆ ಸಂಚಾರ ನಡೆಸಲಿದೆ.
Three train services to start everyday from Mangalore to Bangalore from April 10th stated railway department
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm