ಬ್ರೇಕಿಂಗ್ ನ್ಯೂಸ್
05-04-21 01:07 pm Headline Karnataka News Network ಕರ್ನಾಟಕ
ಬೆಳಗಾವಿ,ಎ.5: ಅಶ್ಲೀಲ ಸಿಡಿ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ಡಾ.ರವೀಂದ್ರ ವಿವರಣೆ ನೀಡಿದ್ದು, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ನಿನ್ನೆ ರಾತ್ರಿ ಉಸಿರಾಟ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಶುಗರ್, ಬಿಪಿಯಲ್ಲಿ ಏರುಪೇರಾಗಿದ್ದ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಕೊವಿಡ್ ನಿಯಮದಂತೆ ಇನ್ನೂ 5 ದಿನ ಆಸ್ಪತ್ರೆಯಲ್ಲಿರಬೇಕು ಎಂದು ತಿಳಿಸಿದ್ದಾರೆ.
ರಮೇಶ್ ಜಾರಕಿಹೊಳಿಗೆ ಏಪ್ರಿಲ್ ಒಂದರಂದೇ ಕೊವಿಡ್ ಪಾಸಿಟಿವ್ ಬಂದಿದೆ. ಪಾಸಿಟಿವ್ ಬಂದ ಬಳಿಕ ಎರಡು ದಿನ ಹೋಮ್ ಐಸೋಲೇಷನ್ನಲ್ಲಿ ಇದ್ದ ಅವರು ನಿನ್ನೆ ಉಸಿರಾಟದ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೋಕಾಕ್ ತಾಲ್ಲೂಕು ಆಸ್ಪತ್ರೆಯ ಐಸಿಯುನಲ್ಲಿ ರಮೇಶ್ ಜಾರಕಿಹೊಳಿಗೆ ಚಿಕಿತ್ಸೆ ನೀಡಲಾಗಿದೆ ಎಂದು ಅಲ್ಲಿಯ ವೈದ್ಯ ಡಾ.ರವೀಂದ್ರ ಅಂಟೀನ್ ಹೇಳಿದ್ದಾರೆ.

ಕಾರು ಚಾಲಕ, ಅಡುಗೆ ಭಟ್ಟನಿಗೂ ಕೊರೊನಾ;
ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೊರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಕಾರು ಚಾಲಕ ಹಾಗೂ ಅಡುಗೆ ಸಹಾಯಕರಿಗೂ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯ ರವೀಂದ್ರ ಸ್ಪಷ್ಟನೆ ನೀಡಿದ್ದು, ಮಾಜಿ ಸಚಿವರ ಕಾರು ಚಾಲಕ ಹಾಗೂ ಅಡುಗೆ ಭಟ್ಟ ಇಬ್ಬರಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ಇನ್ನು 15 ದಿನ ಬೆಂಗಳೂರು ಕಡೆ ತಲೆಹಾಕೋಲ್ಲ ರಮೇಶ್ ಜಾರಕಿಹೊಳಿ
ಇದೀಗ ರಮೇಶ್ ಜಾರಕಿಹೊಳಿ ಕಾರು ಚಾಲಕ ಹಾಗೂ ಅಡುಗೆ ಭಟ್ಟನಿಗೂ ಕೊರೊನಾ ಬಂದಿದ್ದು, ಅವರ ಆಪ್ತ ವರ್ಗದಲ್ಲಿದ್ದವರೆಲ್ಲರೂ ಕೊರೊನಾ ಪರೀಕ್ಷೆಗೆ ಒಳಗಾಗಬೇಕಾಗಬಹುದಾದ ಪರಿಸ್ಥಿತಿ ಸೃಷ್ಟಿಯಾಗಿದೆ. ಸದ್ಯ ಕೊರೊನಾ ಪಾಸಿಟಿವ್ ಬಂದಿರುವುದರಿಂದಾಗಿ ರಮೇಶ್ ಜಾರಕಿಹೊಳಿ ಉಪಚುನಾವಣೆ ಪ್ರಚಾರಕ್ಕೆ ಗೈರಾಗಲಿದ್ದಾರೆ. ಇನ್ನೊಂದೆಡೆ ರಮೇಶ್ ಜಾರಕಿಹೊಳಿಯವರ ನಿವಾಸದಿಂದ ಕೂಗಳತೆ ದೂರದಲ್ಲಿರುವ ಗೋಕಾಕ ತಾಲ್ಲೂಕು ಆಸ್ಪತ್ರೆ ವೈದ್ಯರು ರಮೇಶ್ ಜಾರಕಿಹೊಳಿಗೆ ಇನ್ನೂ ಐದರಿಂದ ಹತ್ತು ದಿನಗಳ ಕಾಲ ಐಸಿಯುನಲ್ಲಿಯೇ ಚಿಕಿತ್ಸೆ ನೀಡಲು ಯೋಚಿಸಿದ್ದಾರೆ. ಆದ ಕಾರಣ ಹತ್ತು ಹದಿನೈದು ದಿನಗಳವರೆಗೆ ರಮೇಶ್ ಜಾರಕಿಹೊಳಿ ಬೆಂಗಳೂರಿನ ಕಡೆ ತಲೆ ಹಾಕುವ ಸಂಭವ ಕಡಿಮೆ ಇದ್ದು, ಎಸ್ಐಟಿ ತನಿಖೆಯಿಂದಲೂ ತಾತ್ಕಾಲಿಕ ವಿನಾಯಿತಿ ಪಡೆಯುವ ಸಾಧ್ಯತೆ ದಟ್ಟವಾಗಿದೆ.
Former Karnataka Minister and Bharatiya Janata Party (BJP) leader Ramesh Jarkiholi has tested positive for coronavirus. Ramesh Jarkiholi, who is in Bengaluru, is self-quarantining after his test result for the coronavirus infection came back as positive.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm