ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.
ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.
ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm