ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm