ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm