ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
04-03-26 11:51 am
HK News Staffer
ಬೆಂಗಳೂರಿನಲ್ಲಿ 10 ಕೋಟಿ ಮೌಲ್ಯದ ಬೃಹತ್ ಡ್ರಗ್ಸ್ ಪತ...
03-03-26 08:39 pm
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
04-03-26 10:54 am
HK News Staffer
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm