ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm