ಬ್ರೇಕಿಂಗ್ ನ್ಯೂಸ್
07-04-21 12:37 pm Headline Karnataka News Network ಕರ್ನಾಟಕ
ಶಿರಸಿ,ಎ.7: ಇತ್ತೀಚಿಗಷ್ಟೇ ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ಅವರಿಗೆ ಮಂಗಳವಾರದಂದು ಬೆದರಿಕೆ ಕರೆ ಬಂದ ನಂತರ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಗೋವಿಂದ ಶೆಟ್ಟಿ ಅವರಿಂದ ಹೊಸ ಮಾರುಕಟ್ಟೆ ಠಾಣೆಯಲ್ಲಿ ಜೀವ ಬೆದರಿಕೆಯ ದೂರು ದಾಖಲಾಗಿದೆ.
ಶಿರಸಿಯಲ್ಲಿರುವ ಸಂಸದರ ಮನೆಗೆ ಕರೆಮಾಡಿದ ವ್ಯಕ್ತಿಯು, ‘ನೀನು ಅನಂತ ಕುಮಾರ ಹೆಗಡೆ, ಬಿಜೆಪಿ ಪಕ್ಷದ ಸಂಸದ….. ಹೌದು ತಾನೆ? ನಾನು ಹಿಂದಿನ ಬಾರಿ ಕರೆ ಮಾಡಿದ್ದಾಗ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದೆ. ಈ ಬಾರಿ ಏನು ಮಾಡುತ್ತೀಯಾ? ನೀನು ಪೊಲೀಸರಿಗೆ ದೂರು ನೀಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು,’ ಎಂದು ಉರ್ದು ಮಿಶ್ರಿತ ಹಿಂದಿಯಲ್ಲಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆಂದು ದೂರಿನಲ್ಲಿ ಹೇಳಲಾಗಿದೆ.
ದೂರಿನ ಪ್ರಕಾರ, ಮುಂದುವರಿದು ಮಾತಾಡಿರುವ ಈ ಅನಾಮಧೇಯ ವ್ಯಕ್ತಿಯು, ಸಂಸದರನ್ನು ಸುಮ್ಮನೆ ಬಿಡುವುದಿಲ್ಲ ಅಂತ ಬೆದರಿಕೆ ಹಾಕಿದ್ದಾನಂತೆ.

ಸಂಸದ ಅನಂತ ಕುಮಾರ್ ಹೆಗಡೆಯವರಿಗೆ ಈ ಹಿಂದೆಯೂ ಜೀವ ಬೆದರಿಕೆ ಬಂದಿತ್ತು ಎನ್ನುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ
ಸಂಸದರಿಗೆ ಪದೇ ಪದೇ ಜೀವ ಬೆದರಿಕೆ ಕರೆ ಬರುತ್ತಿರುವುದರಿಂದ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಮತ್ತು ಕರೆ ಮಾಡಿರುವ ವ್ಯಕ್ತಿಯನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿದೆ ಎಂದು ಸುರೇಶ್ ಮಾಧ್ಯಮಗಳಿಗೆ ಹೇಳಿದರು.
ಕಳೆದ ಬಾರಿ ಅಂದರೆ ಫೆಬ್ರುವರಿ 16,2019 ರಂದು ಸಂಸದರಿಗೆ ಜೀವ ಬೆದರಿಕೆ ಕರೆ ಬಂದಾಗಲೂ ಪ್ರಕರಣ ದಾಖಲಾಗಿತ್ತು.
MP Anant Kumar Hegde gets a life threat call case filed in Sirsi. The MP had received a threat call even on Feb 16, 2019.
13-12-25 04:00 pm
Bangalore Correspondent
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
ಅಧಿವೇಶನ ಮುಗಿದ ತಕ್ಷಣವೇ ಡಿಕೆಶಿ ಮುಖ್ಯಮಂತ್ರಿಯಾಗುತ...
12-12-25 03:18 pm
ಅಧಿವೇಶನ ಮಧ್ಯೆಯೂ ಡಿಕೆಶಿ ಆಪ್ತ ಶಾಸಕರು, ಸಚಿವರ ಡಿನ...
12-12-25 03:15 pm
12-12-25 11:00 pm
HK News Desk
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
ಶಾಲೆಗಳಲ್ಲಿ ವಂದೇ ಮಾತರಂ ಹಾಡುವುದು ಕಡ್ಡಾಯಗೊಳಿಸಿ ;...
10-12-25 10:54 pm
13-12-25 04:36 pm
Mangalore Correspondent
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
Mangalore Jail Inmate, Death: ಎದೆನೋವು ; ಉಡುಪಿ...
11-12-25 10:55 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm