ಬ್ರೇಕಿಂಗ್ ನ್ಯೂಸ್
08-04-21 08:11 pm Headline Karnataka News Network ಕರ್ನಾಟಕ
ಮೂಲ್ಕಿ, ಎ.8: ರೌಡಿ ಶೀಟರ್ ಆರೋಪಿಗೆ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ತೆರಳಿದ್ದ ಎಎಸ್ಐ ಮೇಲೆ ತಲವಾರು ಬೀಸಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿ ಬಳಿಯ ಲಿಂಗಪ್ಪಯ್ಯಕಾಡಿನಲ್ಲಿ ನಡೆದಿದೆ.
ಪ್ರಕರಣ ಸಂಬಂಧಿಸಿ ರೌಡಿಶೀಟರ್ ಆಗಿರುವ ಲಿಂಗಪ್ಪಯ್ಯ ಕಾಡು ನಿವಾಸಿ ಅನ್ಸಾರ್ ನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಅನ್ಸಾರ್ ಮತ್ತು ಆತನ ತಂದೆ ಸಾದಿಕ್ ನವೆಂಬರ್ ನಲ್ಲಿ ಮೂಕ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದು ಈ ಬಗ್ಗೆ ವಿಚಾರಣೆಗೆ ಬರುವಂತೆ ಪೊಲೀಸರು ಕರೆದಿದ್ದರೂ, ಠಾಣೆಗೆ ಬಂದಿರಲಿಲ್ಲ. ಈ ಬಗ್ಗೆ 41 ಸಿಆರ್ ಪಿಸಿ ಪ್ರಕಾರ, ಆರೋಪಿಗೆ ಸ್ಟೇಶನ್ ನೋಟೀಸ್ ನೀಡಿ, ವಿಚಾರಣೆಗೆ ಕರೆಯಲೆಂದು ಮೂಲ್ಕಿ ಎಎಸ್ಐ ಅಶೋಕ್ ಮತ್ತು ಸಿಬಂದಿ ಸುರೇಶ್ ಲಿಂಗಪ್ಪಯ್ಯ ಕಾಡಿಗೆ ತೆರಳಿದ್ದರು. ಪೊಲೀಸರು ಬಂದಿದ್ದನ್ನು ನೋಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ತನ್ನ ಮನೆಗೆ ತೆರಳಿ ಅವಿತುಕೊಂಡಿದ್ದ.
ಪೊಲೀಸ್ ಸಿಬಂದಿ ಅಲ್ಲಿಗೆ ತೆರಳಿದಾಗ, ಮನೆಗೆ ಬಾಗಿಲು ಹಾಕಿ ಒಳಗೆ ಕುಳಿತಿದ್ದನ್ನು ತಿಳಿದು ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಬಳಿಕ ಪೊಲೀಸರು ಬಾಗಿಲು ದೂಡಿ, ಒಳಕ್ಕೆ ಹೋಗುತ್ತಿದ್ದಂತೆ ಒಳಭಾಗದಲ್ಲಿದ್ದ ಅನ್ಸಾರ್ ತಲವಾರು ಬೀಸಿದ್ದಾನೆ. ಈ ವೇಳೆ, ಅಶೋಕ್ ಮತ್ತು ಸತೀಶ್ ಎಂಬ ಇನ್ನೊಬ್ಬ ಸಿಬಂದಿಯ ಕೈಗೆ ಗಾಯವಾಗಿದೆ. ಕೂಡಲೇ ಪೊಲೀಸರು ಅನ್ಸಾರ್ ನನ್ನು ಹಿಡಿದು ಬಂಧಿಸಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಪೊಲೀಸರು ಬಳಿಕ ಅಲ್ಲಿಂದ ತೆರಳಿದ್ದರು. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಎಎಸ್ಐ ಅಶೋಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಇಂದು ಬಿಡುಗಡೆಯಾಗಿದ್ದಾರೆ.
ರೌಡಿ ಅನ್ಸಾರ್ ಮತ್ತು ಆತನಿಗೆ ಸಹಕರಿಸಿದ ಆರೋಪದಲ್ಲಿ ತಂದೆ ಸಾದಿಕ್, ತಾಯಿ ಜುಬೈದಾ, ಇನ್ನೊಬ್ಬ ಮಹಿಳೆ ಮಮ್ತಾಜ್ ವಿರುದ್ಧ ಎಎಸ್ಐ ಅಶೋಕ್ ದೂರಿನಂತೆ ಮೂಲ್ಕಿ ಠಾಣೆಯಲ್ಲಿ ಕೊಲೆಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿ ಸಂಬಂಧಿಸಿ ಪ್ರಕರಣ ದಾಖಲಾಗಿದೆ. ಅನ್ಸಾರ್ ಮೂಲ್ಕಿ ಠಾಣೆ ವ್ಯಾಪ್ತಿಯಲ್ಲಿ ರೌಡಿಯಾಗಿದ್ದು, ಕಳೆದ ಅಕ್ಟೋಬರ್ ನಲ್ಲಿ ಲಿಂಗಪ್ಪಯ್ಯ ಕಾಡಿನಲ್ಲಿ ಮನೆಯೊಂದಕ್ಕೆ ನುಗ್ಗಿ ದರೋಡೆಗೆ ಯತ್ನ ನಡೆಸಿದ ಬಗ್ಗೆ ದೂರು ದಾಖಲಾಗಿತ್ತು. ಆನಂತರ ನವೆಂಬರ್ ನಲ್ಲಿ ತಂದೆ ಮಗ ಸೇರಿ ಒಬ್ಬ ಬಡಪಾಯಿಗೆ ಹಲ್ಲೆಗೈದಿದ್ದ ಬಗ್ಗೆ ದೂರು ದಾಖಲಾಗಿತ್ತು. ಐಕಳದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣದಲ್ಲಿಯೂ ಅನ್ಸಾರ್ ಹೆಸರು ಕೇಳಿಬಂದಿತ್ತು. ಆದರೆ, ಸರಣಿಯಂತೆ ಪ್ರಕರಣ ದಾಖಲಾಗಿದ್ದರೂ ಅನ್ಸಾರ್ ಪೊಲೀಸರ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ.
Police Assistant Sub Inspector who went to service notice was attacked with the sword by rowdy shetter in Mulki. The arrested has been identified as Ansar.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm